ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್ಆರ್ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್ಕುಮಾರ್ ಉಪಸ್ಥಿತರಿದ್ದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…