ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್ಆರ್ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್ಕುಮಾರ್ ಉಪಸ್ಥಿತರಿದ್ದರು.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…