ಮಂಗಳೂರು-ಪುತ್ತೂರು ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಯಾಗಲಿ

August 19, 2019
1:00 PM

ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ  ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.

ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ  ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು   ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror