ಮಂಗಳೂರು-ಪುತ್ತೂರು ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಯಾಗಲಿ

August 19, 2019
1:00 PM

ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ  ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.

Advertisement

ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ  ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು   ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group