ಸುದ್ದಿಗಳು

ಮಂಗಳೂರು-ಪುತ್ತೂರು ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಯಾಗಲಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ  ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.

Advertisement

ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ  ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು   ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

8 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

9 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

10 hours ago