(ಸಾಂದರ್ಭಿಕ ಚಿತ್ರ)
ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.
ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…