(ಸಾಂದರ್ಭಿಕ ಚಿತ್ರ)
ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.
ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…