Advertisement
MIRROR FOCUS

ಮಂಗಳೂರು ಪ್ರಯಾಣದ ಡೈಲಿ ಪಾಸ್ ರದ್ದುಪಡಿಸಿದ ಕೇರಳ

Share

ಸುಳ್ಯ: ಕಾಸರಗೋಡಿನಿಂದ ಮಂಗಳೂರಿಗೆ ಉದ್ಯೋಗ ಮತ್ತಿತರ ಅಗತ್ಯಕ್ಕಾಗಿ ಪ್ರಯಾಣಕ್ಕೆ ದಿನ ನಿತ್ಯದ ಪಾಸ್ ನೀಡುವುದನ್ನು ಕಾಸರಗೋಡು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಇದು ದಿನ ನಿತ್ಯದ ಅಗತ್ಯಕ್ಕಾಗಿ ಗಡಿಯ ಮೂಲಕ ಪ್ರಯಾಣಿಸುವವರಿಗೆ ಆತಂಕ ಸೃಷ್ಠಿಸಿದೆ. ಹೊಸ ನಿರ್ಧಾರದ ಹಿನ್ನಲೆಯಲ್ಲಿ ತಲಪಾಡಿ ಗಡಿಯಲ್ಲಿ ನೂರಾರು ಮಂದಿ ಗಡಿ ದಾಟಲಾಗದೆ ಸಿಲುಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಿನ ನಿತ್ಯದ ಪಾಸ್ ಸ್ಥಗಿತಗೊಳಿಸಲು ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆಯಲ್ಲಿ ಕಾಸರಗೋಡಿನಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಸರಗೋಡಿನಿಂದ ಹೋಗಿ ಮಂಗಳೂರಿನಲ್ಲಿ ಉದ್ಯೋಗ ಮಾಡುವವರು ಅಲ್ಲೇ ಉಳಿದು ಉದ್ಯೋಗ ಮಾಡಬೇಕು.‌ ಅದೇ ರೀತಿ ಕಾಸರಗೋಡಿನಲ್ಲಿ ವೃತ್ತಿ ನಿರ್ವಹಿಸುವವರು ದಕ್ಷಿಣ ಕನ್ನಡ ಜಿಲ್ಲೆಯವರು ಕೂಡ ಕಾಸರಗೋಡಿನಲ್ಲಿಯೇ ಉಳಿದುಕೊಳ್ಳಬೇಕಾಗಿದೆ. ಹೀಗೆ ಕನಿಷ್ಟ 28 ದಿನಗಳ ಕಾಲ ಅಲ್ಲಲ್ಲಿಯೇ ಉಳಿದುಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ ಎಲ್ಲಾ ಗಡಿಯ ಮೂಲಕವೂ ಕೇರಳ ಭೇಟಿಯನ್ನು ನಿಷೇಧಿಸಲಾಗಿದೆ. ಗಡಿ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ ಚೆಕ್ ಪೋಸ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೇರಳದ ಹೊಸ ನಿರ್ಧಾರದಿಂದ ಡೈಲಿ ಪಾಸ್ ಪಡೆದು ದಿನ ನಿತ್ಯ ಪ್ರಯಾಣಿಸುವ ಗಡಿ ಪ್ರದೇಶದ ಜನ ತ್ರಿಶಂಕು ಸ್ವರ್ಗದಲ್ಲಿ ಸಿಲುಕಿದಂತಾಗಿದೆ.

ಕೊರೋನಾಕ್ಕಿಂತ ದೊಡ್ಡ ಆತಂಕವಾದ ಗಡಿ: ಅತ್ಯಂತ ನಿಕಟ ಸಂಪರ್ಕ ಇರುವ ಎರಡು ಜಿಲ್ಲೆಗಳ ಗಡಿಪ್ರದೇಶಗಳ ಗಡಿಯನ್ನು ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಿರುವುದು ಗಡಿ ಪ್ರದೇಶದ ಜನರ ಬದುಕನ್ನು ದುಸ್ತರವಾಗಿಸಿದೆ. ಕೊರೋನಾ ಆತಂಕದ ಜೊತೆಗೆ ಗಡಿ ಸಮಸ್ಯೆಯೂ ಎರಡೂ ಜಿಲ್ಲೆಗಳ ಜನರಿಗೆ ದೊಡ್ಡ ಆತಂಕ ಮತ್ತು ತಲೆ ನೋವನ್ನು ತಂದಿರಿಸಿದೆ.

ಕಳೆದ ಮಾರ್ಚ್ ನಲ್ಲಿ ಕಾಸರಗೋಡಿನಲ್ಲಿ ಕೊರೋನಾ ಪ್ರಕರಣಗಳು ಅಧಿಕ ಇದೆ ಎಂದು ದಕ್ಷಿಣ ಕನ್ನಡ-ಕಾಸರಗೋಡು ಜಿಲ್ಲೆ ಗಡಿ ರಸ್ತೆಯಲ್ಲಿ ಮಣ್ಣು ಹಾಕಿ ಗಡಿಯನ್ನು ದ.ಕ.ಜಿಲ್ಲಾಡಳಿತ ಮುಚ್ಚಿತ್ತು. ಅದು ಇನ್ನೂ ತೆರೆದುಕೊಂಡಿಲ್ಲ.‌ ಅಂದು ಭಾರೀ ಪ್ರತಿರೋಧ ಒಡ್ಡಿದ್ದ ಕೇರಳಿಗರು ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಅಧಿಕ ಇದೆ ಎಂದು ಎಂದು ಗಡಿ ನಿಯಂತ್ರಣವನ್ನು ಬಿಗುಗೊಳಿಸಿದೆ. ಗಡಿಯನ್ನು ಮುಚ್ಚಿದಾಗ ಎರಡು ಜಿಲ್ಲೆಯ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಪರಸ್ಪರ ರಾಜಕೀಯ ಆರೋಪ- ಪ್ರತ್ಯಾರೋಪ ನಡೆಸಿದರೇ ಹೊರತು ಪರಸ್ಪರ ಸಹಕಾರ, ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿ ಒಟ್ಟಾಗಿ ಕೊರೋನಾವನ್ನು ಪ್ರತಿರೋಧಿಸುವ ಪ್ರಬುದ್ಧತೆಯನ್ನು ತೋರಿಲ್ಲ ಎಂಬ ಕೊರಗು ಗಡಿನಾಡ ಜನತೆಯದ್ದು. ವ್ಯವಹಾರಿಕ, ಶೈಕ್ಷಣಿಕ, ಸಾಮಾಜಿಕ ಎಲ್ಲಾ ರೀತಿಯಲ್ಲಿಯೂ ಅನ್ಯೂನ್ಯತೆಯ ಬದುಕು ಸಾಗಿಸಿದ್ದ ಜನರಿಗೆ ಕೊರೋನಾ ಮತ್ತು ಗಡಿ ಮುಚ್ಚುವಿಕೆ ಬಲು ದೊಡ್ಡ ಆತಂಕ ಮತ್ತು ನೋವನ್ನು ತಂದೊಡ್ಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

20 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago