ಜಿಲ್ಲೆ

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವಿಶ್ವ ಯೋಗ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅಭಿಪ್ರಾಯಪಟ್ಟರು.

Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಮತ್ತು ಕಳೆದ ಒಂದು ತಿಂಗಳಿನಿಂದ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಎಂಬುದು ಜೀವನಶೈಲಿ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡಾಗ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಗಟ್ಟಿಯಾಗಲು ಸಾಧ್ಯ. ನಮ್ಮ ನಿತ್ಯ ಒತ್ತಡ ಮತ್ತು ಜಂಜಾಟದಿಂದಾಗಿ ಆರೋಗ್ಯದ ಮೇಲೆ ಪರಿಣಾಮಗಳು ಬೀರುತ್ತಿವೆ. ಆದ್ದರಿಂದ ನಮ್ಮನ್ನು ನಾವು ಯೋಗದಲ್ಲಿ ತೊಡಗಿಸಿಕೊಂಡಾಗ ಇವೆಲ್ಲಕ್ಕೂ ಮುಕ್ತಿ ಕಾಣಿಸಲು ಸಾಧ್ಯ ಎಂದು ಲಕ್ಷ್ಮೀಪ್ರಸಾದ್ ಹೇಳಿದರು.
ಐಸಿರಿ ಹೆಲ್ದಿ ಇಂಡಿಯಾ ಮಿಷನ್ ಇದರ ದರ್ಶನ್ ಜೈನ್ ಮಾತನಾಡಿ, ಯೋಗ ಶಿಬಿರಗಳು ದಿನ ಲೆಕ್ಕಕ್ಕೆ ಸೀಮಿತವಾಗಬಾರದು. ಅದು ನಿರಂತರವಾಗಿರಬೇಕು. ಆ ದೃಷ್ಟಿಯಿಂದ ಐಸಿರಿ ಹೆಲ್ತ್ ಇಂಡಿಯಾ ವತಿಯಿಂದ ದಿನನಿತ್ಯ ಉಚಿತ ಯೋಗ ಕಾರ್ಯಕ್ರಮ ಆಯೋಜಿಸುವ ಚಿಂತನೆ ನಡೆಸಿದ್ದೇವೆ ಎಂದರು.
ಇದೇ ಸಂದರ್ಭ ಪತ್ರಕರ್ತರಿಗೆ ನಿರಂತರ ಒಂದು ತಿಂಗಳ ಕಾಲ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕಿ ಭವ್ಯಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಒಂದು ತಿಂಗಳ ಕಾಲ ಯೋಗ ತರಬೇತಿಯಲ್ಲಿ ಪಾಲ್ಗೊಂಡ ಪತ್ರಕರ್ತರಾದ ರಾಘವ ಎಂ ಮತ್ತು ಭಾಸ್ಕರ ರೈ ಕಟ್ಟ ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಮೋಟುಕಾನ ಸ್ವಾಗತಿಸಿ, ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಡಿ ಪಳ್ಳಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

5 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

6 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

6 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

6 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

14 hours ago