Advertisement
ಜಿಲ್ಲೆ

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವಿಶ್ವ ಯೋಗ ದಿನಾಚರಣೆ

Share

ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಮತ್ತು ಕಳೆದ ಒಂದು ತಿಂಗಳಿನಿಂದ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಎಂಬುದು ಜೀವನಶೈಲಿ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡಾಗ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಗಟ್ಟಿಯಾಗಲು ಸಾಧ್ಯ. ನಮ್ಮ ನಿತ್ಯ ಒತ್ತಡ ಮತ್ತು ಜಂಜಾಟದಿಂದಾಗಿ ಆರೋಗ್ಯದ ಮೇಲೆ ಪರಿಣಾಮಗಳು ಬೀರುತ್ತಿವೆ. ಆದ್ದರಿಂದ ನಮ್ಮನ್ನು ನಾವು ಯೋಗದಲ್ಲಿ ತೊಡಗಿಸಿಕೊಂಡಾಗ ಇವೆಲ್ಲಕ್ಕೂ ಮುಕ್ತಿ ಕಾಣಿಸಲು ಸಾಧ್ಯ ಎಂದು ಲಕ್ಷ್ಮೀಪ್ರಸಾದ್ ಹೇಳಿದರು.
ಐಸಿರಿ ಹೆಲ್ದಿ ಇಂಡಿಯಾ ಮಿಷನ್ ಇದರ ದರ್ಶನ್ ಜೈನ್ ಮಾತನಾಡಿ, ಯೋಗ ಶಿಬಿರಗಳು ದಿನ ಲೆಕ್ಕಕ್ಕೆ ಸೀಮಿತವಾಗಬಾರದು. ಅದು ನಿರಂತರವಾಗಿರಬೇಕು. ಆ ದೃಷ್ಟಿಯಿಂದ ಐಸಿರಿ ಹೆಲ್ತ್ ಇಂಡಿಯಾ ವತಿಯಿಂದ ದಿನನಿತ್ಯ ಉಚಿತ ಯೋಗ ಕಾರ್ಯಕ್ರಮ ಆಯೋಜಿಸುವ ಚಿಂತನೆ ನಡೆಸಿದ್ದೇವೆ ಎಂದರು.
ಇದೇ ಸಂದರ್ಭ ಪತ್ರಕರ್ತರಿಗೆ ನಿರಂತರ ಒಂದು ತಿಂಗಳ ಕಾಲ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕಿ ಭವ್ಯಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಒಂದು ತಿಂಗಳ ಕಾಲ ಯೋಗ ತರಬೇತಿಯಲ್ಲಿ ಪಾಲ್ಗೊಂಡ ಪತ್ರಕರ್ತರಾದ ರಾಘವ ಎಂ ಮತ್ತು ಭಾಸ್ಕರ ರೈ ಕಟ್ಟ ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಮೋಟುಕಾನ ಸ್ವಾಗತಿಸಿ, ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಡಿ ಪಳ್ಳಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

2 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

2 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago