ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಎ ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರತಿ ತಿಂಗಳು ನಡೆಯುವ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣಾ ಶಿಬಿರ ‘ಮೀಡಿಯಾ ಹೆಲ್ತ್ ಕ್ಲೀನಿಕ್’ ಮಂಗಳವಾರ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದ ಶಿಬಿರದಲ್ಲಿ ಹಲವು ಮಂದಿ ಪತ್ರಕರ್ತರು ಆರೋಗ್ಯ ತಪಾಸಣೆ ನಡೆಸಿದರು. ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿ ತಿಂಗಳ ಎರಡನೇ ಮಂಗಳವಾರ ಮಂಗಳೂರು ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲೀನಿಕ್ ನಡೆಯುತ್ತದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…