ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel