ಮಂಗಳೂರು : ಬಾಂಬ್ ಪತ್ತೆ ಪ್ರಕರಣ : ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ

January 22, 2020
11:43 AM

ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ.  ಬೆಂಗಳೂರು ನಗರದ  ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Advertisement

ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್​ ಪೊಲೀಸ್​ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್​ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್​ ಬಾಂಬ್​ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್​ ನಿಷ್ಟ್ರಿಯ ದಳ ಬಾಂಬ್​ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ
May 14, 2025
11:20 AM
by: The Rural Mirror ಸುದ್ದಿಜಾಲ
ಜೂ.30 ರೊಳಗೆ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗವುದು | ಕಂದಾಯ ಸಚಿವ ಕೃಷ್ಣಬೈರೇಗೌಡ
May 14, 2025
11:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group