Aditya Rao
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ. ಬೆಂಗಳೂರು ನಗರದ ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್ ಬಾಂಬ್ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್ ನಿಷ್ಟ್ರಿಯ ದಳ ಬಾಂಬ್ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…