Aditya Rao
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ. ಬೆಂಗಳೂರು ನಗರದ ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್ ಬಾಂಬ್ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್ ನಿಷ್ಟ್ರಿಯ ದಳ ಬಾಂಬ್ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…