Aditya Rao
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ. ಬೆಂಗಳೂರು ನಗರದ ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್ ಬಾಂಬ್ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್ ನಿಷ್ಟ್ರಿಯ ದಳ ಬಾಂಬ್ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…