Aditya Rao
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ. ಬೆಂಗಳೂರು ನಗರದ ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್ ಬಾಂಬ್ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್ ನಿಷ್ಟ್ರಿಯ ದಳ ಬಾಂಬ್ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…