ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…