ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…