Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಇದು ಬಾಂಬ್ ಅಲ್ಲ ಪಟಾಕಿ ಎಂದು ಎಚ್ ಡಿ ಕೆ

Share

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ  ಸೋಮವಾರ ಪತ್ತೆಯಾದ ಬಾಂಬ್ ಬಗ್ಗೆ ನನಗೆ ಇನ್ನೂ ಪೊಲೀಸರ ಮೇಲೆ ಅನುಮಾನವಿದೆ. ಇದರ ಹಿಂದೆ ಏನೋ ಉದ್ದೇಶ ಇದ್ದಂತೆ ಕಾಣುತ್ತದೆ. ಹೀಗಾಗಿ ಘಟನೆಯ ಸಿಸಿಟಿವಿ ವಿಡಿಯೋ ಹಾಗೂ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ಜನರ ಮುಂದೆ ಸಮಗ್ರ ಮಾಹಿತಿ ಇಡಬೇಕು ಎಂದು ಶೃಂಗೇರಿಯಲ್ಲಿ ಸೋಮವಾರ  ಹೇಳಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಮತ್ತೆ ಪ್ರತಿಕ್ರಿಯೆ ನೀಡಿ ಇದು ಪೊಲೀಸರು ಜಾಗೃತಿಗಾಗಿ ಮಾಡಿಸುವ ಅಣಕು ಪ್ರದರ್ಶನ‌ದಂತೆ ಕಾಣುತ್ತದೆ, ಇದು ಬಾಂಬ್ ಅಲ್ಲ ಪಟಾಕಿ ಎಂದು ವ್ಯಂಗ್ಯವಾಡಿದ್ದಾರೆ. ಇಂತಹ ವಿಷಯದಲ್ಲಿ ಸರ್ಕಾರ ಘನತೆ ಮತ್ತು ಗಂಭೀರತೆಯಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶ. ಕಳೆದ ಎರಡು ವಾರದ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ  ನಡೆದ ಹಿಂಸಾಚಾರದಲ್ಲೂ ಪೊಲೀಸರ ಪಾತ್ರ ಇತ್ತು ಎಂದು ಹೇಳಲಾಗಿದೆ. ಹೀಗಾಗಿ ಈಗ ಪತ್ತೆಯಾದ ಬಾಂಬ್ ಹಿಂದೆಯೂ ಅಂತಹದ್ದೇ ಕೈವಾಡ ಏಕಿರಬಾರದು ಎಂದು ಪ್ರಶ್ನಿಸಿದ್ದಾರೆ. ಈ ಸಂದೇಹ ದೂರವಾಗಲು ಪೊಲೀಸರು ಸತ್ಯಾಸತ್ಯತೆಯನ್ನು  ತೆರೆದಿಡಬೇಕು ಎಂದು ಹೇಳಿದರು. ಇಲ್ಲಿ ಆರ್‌ಎಸ್‌ಎಸ್  ಅಣತಿಯಂತೆ  ಸರಕಾರ ನಡೆಸಬಾರದು. ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು  ಟೀಕಿಸಿದರು. ಘಟನೆಯ ಬಗ್ಗೆ ಮಂಗಳೂರು ಕಮೀಶನರ್ ಜೊತೆ ಮಾತನಾಡಿದ್ದೇನೆ, ಅವರ ಮಾಹಿತಿಯನ್ನು  ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

12 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

13 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago