ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಬಾಂಬ್ ಬಗ್ಗೆ ನನಗೆ ಇನ್ನೂ ಪೊಲೀಸರ ಮೇಲೆ ಅನುಮಾನವಿದೆ. ಇದರ ಹಿಂದೆ ಏನೋ ಉದ್ದೇಶ ಇದ್ದಂತೆ ಕಾಣುತ್ತದೆ. ಹೀಗಾಗಿ ಘಟನೆಯ ಸಿಸಿಟಿವಿ ವಿಡಿಯೋ ಹಾಗೂ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ಜನರ ಮುಂದೆ ಸಮಗ್ರ ಮಾಹಿತಿ ಇಡಬೇಕು ಎಂದು ಶೃಂಗೇರಿಯಲ್ಲಿ ಸೋಮವಾರ ಹೇಳಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಮತ್ತೆ ಪ್ರತಿಕ್ರಿಯೆ ನೀಡಿ ಇದು ಪೊಲೀಸರು ಜಾಗೃತಿಗಾಗಿ ಮಾಡಿಸುವ ಅಣಕು ಪ್ರದರ್ಶನದಂತೆ ಕಾಣುತ್ತದೆ, ಇದು ಬಾಂಬ್ ಅಲ್ಲ ಪಟಾಕಿ ಎಂದು ವ್ಯಂಗ್ಯವಾಡಿದ್ದಾರೆ. ಇಂತಹ ವಿಷಯದಲ್ಲಿ ಸರ್ಕಾರ ಘನತೆ ಮತ್ತು ಗಂಭೀರತೆಯಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶ. ಕಳೆದ ಎರಡು ವಾರದ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ನಡೆದ ಹಿಂಸಾಚಾರದಲ್ಲೂ ಪೊಲೀಸರ ಪಾತ್ರ ಇತ್ತು ಎಂದು ಹೇಳಲಾಗಿದೆ. ಹೀಗಾಗಿ ಈಗ ಪತ್ತೆಯಾದ ಬಾಂಬ್ ಹಿಂದೆಯೂ ಅಂತಹದ್ದೇ ಕೈವಾಡ ಏಕಿರಬಾರದು ಎಂದು ಪ್ರಶ್ನಿಸಿದ್ದಾರೆ. ಈ ಸಂದೇಹ ದೂರವಾಗಲು ಪೊಲೀಸರು ಸತ್ಯಾಸತ್ಯತೆಯನ್ನು ತೆರೆದಿಡಬೇಕು ಎಂದು ಹೇಳಿದರು. ಇಲ್ಲಿ ಆರ್ಎಸ್ಎಸ್ ಅಣತಿಯಂತೆ ಸರಕಾರ ನಡೆಸಬಾರದು. ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಟೀಕಿಸಿದರು. ಘಟನೆಯ ಬಗ್ಗೆ ಮಂಗಳೂರು ಕಮೀಶನರ್ ಜೊತೆ ಮಾತನಾಡಿದ್ದೇನೆ, ಅವರ ಮಾಹಿತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ವಿಡಿಯೋ ನೋಡಿ. ಸುಡುಮಣ್ಣೂ ಆಯ್ತು, ಕಸಗಳ ವಿಲೇವಾರಿಯೂ ಆಯ್ತು ಎಂದು ತೋಟದ…
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ(Heat Wave) ಸಿದ್ಧರಾಗಿರಿ.…
ಮುಖ್ಯವಾಗಿ ಯಾವುದೇ ಸಮಾರಂಭ(Function) ಪ್ರಾರಂಭವಾಗುವ ಮುಂಚೆ, ಆ ಸ್ಥಳ ಎಷ್ಟು ಸ್ವಚ್ಛತೆಯಿಂದ(Clean) ಕೂಡಿತ್ತೋ,…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…