Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಇದು ಬಾಂಬ್ ಅಲ್ಲ ಪಟಾಕಿ ಎಂದು ಎಚ್ ಡಿ ಕೆ

Share

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ  ಸೋಮವಾರ ಪತ್ತೆಯಾದ ಬಾಂಬ್ ಬಗ್ಗೆ ನನಗೆ ಇನ್ನೂ ಪೊಲೀಸರ ಮೇಲೆ ಅನುಮಾನವಿದೆ. ಇದರ ಹಿಂದೆ ಏನೋ ಉದ್ದೇಶ ಇದ್ದಂತೆ ಕಾಣುತ್ತದೆ. ಹೀಗಾಗಿ ಘಟನೆಯ ಸಿಸಿಟಿವಿ ವಿಡಿಯೋ ಹಾಗೂ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ಜನರ ಮುಂದೆ ಸಮಗ್ರ ಮಾಹಿತಿ ಇಡಬೇಕು ಎಂದು ಶೃಂಗೇರಿಯಲ್ಲಿ ಸೋಮವಾರ  ಹೇಳಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ಮತ್ತೆ ಪ್ರತಿಕ್ರಿಯೆ ನೀಡಿ ಇದು ಪೊಲೀಸರು ಜಾಗೃತಿಗಾಗಿ ಮಾಡಿಸುವ ಅಣಕು ಪ್ರದರ್ಶನ‌ದಂತೆ ಕಾಣುತ್ತದೆ, ಇದು ಬಾಂಬ್ ಅಲ್ಲ ಪಟಾಕಿ ಎಂದು ವ್ಯಂಗ್ಯವಾಡಿದ್ದಾರೆ. ಇಂತಹ ವಿಷಯದಲ್ಲಿ ಸರ್ಕಾರ ಘನತೆ ಮತ್ತು ಗಂಭೀರತೆಯಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರು ಅತ್ಯಂತ ಸೂಕ್ಷ್ಮ ಪ್ರದೇಶ. ಕಳೆದ ಎರಡು ವಾರದ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ  ನಡೆದ ಹಿಂಸಾಚಾರದಲ್ಲೂ ಪೊಲೀಸರ ಪಾತ್ರ ಇತ್ತು ಎಂದು ಹೇಳಲಾಗಿದೆ. ಹೀಗಾಗಿ ಈಗ ಪತ್ತೆಯಾದ ಬಾಂಬ್ ಹಿಂದೆಯೂ ಅಂತಹದ್ದೇ ಕೈವಾಡ ಏಕಿರಬಾರದು ಎಂದು ಪ್ರಶ್ನಿಸಿದ್ದಾರೆ. ಈ ಸಂದೇಹ ದೂರವಾಗಲು ಪೊಲೀಸರು ಸತ್ಯಾಸತ್ಯತೆಯನ್ನು  ತೆರೆದಿಡಬೇಕು ಎಂದು ಹೇಳಿದರು. ಇಲ್ಲಿ ಆರ್‌ಎಸ್‌ಎಸ್  ಅಣತಿಯಂತೆ  ಸರಕಾರ ನಡೆಸಬಾರದು. ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು  ಟೀಕಿಸಿದರು. ಘಟನೆಯ ಬಗ್ಗೆ ಮಂಗಳೂರು ಕಮೀಶನರ್ ಜೊತೆ ಮಾತನಾಡಿದ್ದೇನೆ, ಅವರ ಮಾಹಿತಿಯನ್ನು  ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 hour ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

18 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago