ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ತಲುಪಿದ ಆರೋಪಿ ಆದಿತ್ಯ ರಾವ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್  ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ನಂತರ ಮತ್ತೊಂದು ಪ್ರತಿಷ್ಠಿತ ಕಾಲೇಜಿನಲ್ಲಿ ಎಂಬಿಎ ಮಾರ್ಕೆಟಿಂಗ್ ಆಂಡ್ ಆಪರೇಷನ್ ಸ್ನಾತಕೋತ್ತರ ಪದವಿ ಪಡೆದವನು. ಇಷ್ಟೆಲ್ಲಾ ಓದಿ ಹಂತ ಹಂತವಾಗಿ  ಪ್ರಮೋಶನ್ ಆಗಬೇಕಾದ ಆದಿತ್ಯ ರಾವ್ ಆದದ್ದು ಮಾತ್ರಾ ಡಿಮೋಶನ್. ವೈಟ್ ಕಾಲರ್ ಜಾಬ್ ನಿಂದ ಸಾಮಾನ್ಯ ಕೆಲಸದ ಕಡೆಗೆ ಹೊರಳಿದ್ದು…!.

Advertisement
Advertisement

ಮನೆಯಿಂದ ಉತ್ತಮ ವ್ಯಾಸಾಂಗಕ್ಕೆ ಹೆತ್ತವರು ಸಂಪೂರ್ಣವಾಗಿ ಸಹಕಾರ ನೀಡಿದ್ದರು. ಓದಿ ಚೆನ್ನಾದ ಹುದ್ದೆ ಪಡೆಯಲಿ ಎಂದು ಹೆತ್ತವರು ಕನಸು ಕಂಡಿದ್ದರು. ಆದರೆ ಕೊನೆ ಕೊನೆಗೆ ಮನೆಯವರೊಂದಿಗೆ ಹೆಚ್ಚು ಸಂಪರ್ಕವೂ ಇಲ್ಲದೆ ತನ್ನ ಪಾಡಿಗೆ ಇರುತ್ತಿದ್ದ ಆದಿತ್ಯ ರಾವ್ ಈಗ ಬಾಂಬರ್ ಆಗಿ ಬೆಳಕಿಗೆ ಬಂದಿದ್ದಾನೆ. ವಿವಿದೆಡೆ ಕೆಲಸ ಮಾಡಿದ್ದಾನೆ, ಆದರೆ ಎಲ್ಲೂ ಹೆಚ್ಚು ಕಾಲ ಉಳಿಯಲಿಲ್ಲ. ಕ್ಷುಲ್ಲಕ ಕಾರಣಗಳಿಂದ ಹುದ್ದೆ ತೊರೆದಿದ್ದ. ಎಸಿ ವ್ಯವಸ್ಥೆ ಆರೋಗ್ಯಕ್ಕೆ ಹಾಳು ಎಂದು ಕೆಲಸ ಬಿಟ್ಟರೆ, ಇನ್ನೂ ಕೆಲವು ಕಡೆ ಮೇಲಾಧಿಕಾರಿಗಳ ಮೇಲೆ ಸಿಟ್ಟಿನಿಂದ ಹೊರಬಂದ, ಇನ್ನೂ ಕೆಲವು ಕಡೆ ಒತ್ತಡ ಎಂದು ಹೊರಬಂದ…!

ಆದಿತ್ಯ ರಾವ್ ಪೊಲೀಸರಿಗೆ ನೀಡಿರುವ ಮಾಹಿತಿಯಂತೆ ಆತ ಐಸಿಐಸಿಐ ಪ್ರ್ಯುಡೆನ್ಶಿಯಲ್, ಎಚ್‌ಎಸ್‌ಬಿಸಿ, ಎಚ್‌ಡಿಎಫ್‌ಸಿ ಲೈಫ್‌   ಸೇರಿದಂತೆ ವಿವಿಧ ಹಣಕಾಸು ಸಂಬಂಧಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾನೆ. ನಂತರ ಬ್ಯಾಂಕಿಂಗ್ ಕ್ಷೇತ್ರ ಬಿಟ್ಟು ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಧಾರದಲ್ಲಿ  ಕೆಲಸ ಪಡೆದ. ಈ ಆಧಾರದಲ್ಲಿ ಬೆಂಗಳೂರಿನಲ್ಲಿ ವಿವಿದೆಡೆ ಉತ್ತಮ ಕಂಪನಿಗಳಲ್ಲಿ  ಕೆಲಸ ಮಾಡಿದ. ಅಲ್ಲೂ ಕ್ಷೇತ್ರ ಸರಿ ಇಲ್ಲ ಎಂದು ಕೆಲಸ ಬಿಟ್ಟು  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಅರ್ಜಿ ಹಾಕಿ. ಆದರೆ ಇಲ್ಲಿ ಕೆಲಸ ದೊರೆಯದ ಬಳಿಕ ಹೋಟೆಲ್ ಕೆಲಸ, ಹೋಟೆಲ್ ಸೆಕ್ಯೂರಿಟಿ ಗಾರ್ಡ್ ಕೆಲಸ ಸೇರಿದಂತೆ ವಿವಿದೆಡೆ ಕೆಲಸ ಮಾಡಿದ.

ಕೊನೆಗೆ ಈ ವ್ಯವಸ್ಥೆಯೇ ಸರಿ ಇಲ್ಲ ಎಂದು ಹೇಳುತ್ತಲೇ ಈಗ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವ ಮೂಲಕ ಬಾಂಬರ್ ಆಗಿದ್ದಾನೆ. ಅತೀ ಹೆಚ್ಚು ಓದಿ ಡಬಲ್ ಗ್ರಾಜುವೇಟ್ ಆಗಿ ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ಆದಿತ್ಯ ರಾವ್ ಡಿಮೋಶನ್ ಆಗುತ್ತಲೇ ಪೊಲೀಸ್ ಅತಿಥಿಯಾದ…!

 

Advertisement

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

5 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

5 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

9 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

10 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

10 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

15 hours ago