ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ತಲುಪಿದ ಆರೋಪಿ ಆದಿತ್ಯ ರಾವ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್  ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ನಂತರ ಮತ್ತೊಂದು ಪ್ರತಿಷ್ಠಿತ ಕಾಲೇಜಿನಲ್ಲಿ ಎಂಬಿಎ ಮಾರ್ಕೆಟಿಂಗ್ ಆಂಡ್ ಆಪರೇಷನ್ ಸ್ನಾತಕೋತ್ತರ ಪದವಿ ಪಡೆದವನು. ಇಷ್ಟೆಲ್ಲಾ ಓದಿ ಹಂತ ಹಂತವಾಗಿ  ಪ್ರಮೋಶನ್ ಆಗಬೇಕಾದ ಆದಿತ್ಯ ರಾವ್ ಆದದ್ದು ಮಾತ್ರಾ ಡಿಮೋಶನ್. ವೈಟ್ ಕಾಲರ್ ಜಾಬ್ ನಿಂದ ಸಾಮಾನ್ಯ ಕೆಲಸದ ಕಡೆಗೆ ಹೊರಳಿದ್ದು…!.

Advertisement

ಮನೆಯಿಂದ ಉತ್ತಮ ವ್ಯಾಸಾಂಗಕ್ಕೆ ಹೆತ್ತವರು ಸಂಪೂರ್ಣವಾಗಿ ಸಹಕಾರ ನೀಡಿದ್ದರು. ಓದಿ ಚೆನ್ನಾದ ಹುದ್ದೆ ಪಡೆಯಲಿ ಎಂದು ಹೆತ್ತವರು ಕನಸು ಕಂಡಿದ್ದರು. ಆದರೆ ಕೊನೆ ಕೊನೆಗೆ ಮನೆಯವರೊಂದಿಗೆ ಹೆಚ್ಚು ಸಂಪರ್ಕವೂ ಇಲ್ಲದೆ ತನ್ನ ಪಾಡಿಗೆ ಇರುತ್ತಿದ್ದ ಆದಿತ್ಯ ರಾವ್ ಈಗ ಬಾಂಬರ್ ಆಗಿ ಬೆಳಕಿಗೆ ಬಂದಿದ್ದಾನೆ. ವಿವಿದೆಡೆ ಕೆಲಸ ಮಾಡಿದ್ದಾನೆ, ಆದರೆ ಎಲ್ಲೂ ಹೆಚ್ಚು ಕಾಲ ಉಳಿಯಲಿಲ್ಲ. ಕ್ಷುಲ್ಲಕ ಕಾರಣಗಳಿಂದ ಹುದ್ದೆ ತೊರೆದಿದ್ದ. ಎಸಿ ವ್ಯವಸ್ಥೆ ಆರೋಗ್ಯಕ್ಕೆ ಹಾಳು ಎಂದು ಕೆಲಸ ಬಿಟ್ಟರೆ, ಇನ್ನೂ ಕೆಲವು ಕಡೆ ಮೇಲಾಧಿಕಾರಿಗಳ ಮೇಲೆ ಸಿಟ್ಟಿನಿಂದ ಹೊರಬಂದ, ಇನ್ನೂ ಕೆಲವು ಕಡೆ ಒತ್ತಡ ಎಂದು ಹೊರಬಂದ…!

ಆದಿತ್ಯ ರಾವ್ ಪೊಲೀಸರಿಗೆ ನೀಡಿರುವ ಮಾಹಿತಿಯಂತೆ ಆತ ಐಸಿಐಸಿಐ ಪ್ರ್ಯುಡೆನ್ಶಿಯಲ್, ಎಚ್‌ಎಸ್‌ಬಿಸಿ, ಎಚ್‌ಡಿಎಫ್‌ಸಿ ಲೈಫ್‌   ಸೇರಿದಂತೆ ವಿವಿಧ ಹಣಕಾಸು ಸಂಬಂಧಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾನೆ. ನಂತರ ಬ್ಯಾಂಕಿಂಗ್ ಕ್ಷೇತ್ರ ಬಿಟ್ಟು ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಧಾರದಲ್ಲಿ  ಕೆಲಸ ಪಡೆದ. ಈ ಆಧಾರದಲ್ಲಿ ಬೆಂಗಳೂರಿನಲ್ಲಿ ವಿವಿದೆಡೆ ಉತ್ತಮ ಕಂಪನಿಗಳಲ್ಲಿ  ಕೆಲಸ ಮಾಡಿದ. ಅಲ್ಲೂ ಕ್ಷೇತ್ರ ಸರಿ ಇಲ್ಲ ಎಂದು ಕೆಲಸ ಬಿಟ್ಟು  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಅರ್ಜಿ ಹಾಕಿ. ಆದರೆ ಇಲ್ಲಿ ಕೆಲಸ ದೊರೆಯದ ಬಳಿಕ ಹೋಟೆಲ್ ಕೆಲಸ, ಹೋಟೆಲ್ ಸೆಕ್ಯೂರಿಟಿ ಗಾರ್ಡ್ ಕೆಲಸ ಸೇರಿದಂತೆ ವಿವಿದೆಡೆ ಕೆಲಸ ಮಾಡಿದ.

ಕೊನೆಗೆ ಈ ವ್ಯವಸ್ಥೆಯೇ ಸರಿ ಇಲ್ಲ ಎಂದು ಹೇಳುತ್ತಲೇ ಈಗ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವ ಮೂಲಕ ಬಾಂಬರ್ ಆಗಿದ್ದಾನೆ. ಅತೀ ಹೆಚ್ಚು ಓದಿ ಡಬಲ್ ಗ್ರಾಜುವೇಟ್ ಆಗಿ ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ಆದಿತ್ಯ ರಾವ್ ಡಿಮೋಶನ್ ಆಗುತ್ತಲೇ ಪೊಲೀಸ್ ಅತಿಥಿಯಾದ…!

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

7 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

22 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

23 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

23 hours ago