Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ತಲುಪಿದ ಆರೋಪಿ ಆದಿತ್ಯ ರಾವ್…!

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್  ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಗಿಸಿ ನಂತರ ಮತ್ತೊಂದು ಪ್ರತಿಷ್ಠಿತ ಕಾಲೇಜಿನಲ್ಲಿ ಎಂಬಿಎ ಮಾರ್ಕೆಟಿಂಗ್ ಆಂಡ್ ಆಪರೇಷನ್ ಸ್ನಾತಕೋತ್ತರ ಪದವಿ ಪಡೆದವನು. ಇಷ್ಟೆಲ್ಲಾ ಓದಿ ಹಂತ ಹಂತವಾಗಿ  ಪ್ರಮೋಶನ್ ಆಗಬೇಕಾದ ಆದಿತ್ಯ ರಾವ್ ಆದದ್ದು ಮಾತ್ರಾ ಡಿಮೋಶನ್. ವೈಟ್ ಕಾಲರ್ ಜಾಬ್ ನಿಂದ ಸಾಮಾನ್ಯ ಕೆಲಸದ ಕಡೆಗೆ ಹೊರಳಿದ್ದು…!.

ಮನೆಯಿಂದ ಉತ್ತಮ ವ್ಯಾಸಾಂಗಕ್ಕೆ ಹೆತ್ತವರು ಸಂಪೂರ್ಣವಾಗಿ ಸಹಕಾರ ನೀಡಿದ್ದರು. ಓದಿ ಚೆನ್ನಾದ ಹುದ್ದೆ ಪಡೆಯಲಿ ಎಂದು ಹೆತ್ತವರು ಕನಸು ಕಂಡಿದ್ದರು. ಆದರೆ ಕೊನೆ ಕೊನೆಗೆ ಮನೆಯವರೊಂದಿಗೆ ಹೆಚ್ಚು ಸಂಪರ್ಕವೂ ಇಲ್ಲದೆ ತನ್ನ ಪಾಡಿಗೆ ಇರುತ್ತಿದ್ದ ಆದಿತ್ಯ ರಾವ್ ಈಗ ಬಾಂಬರ್ ಆಗಿ ಬೆಳಕಿಗೆ ಬಂದಿದ್ದಾನೆ. ವಿವಿದೆಡೆ ಕೆಲಸ ಮಾಡಿದ್ದಾನೆ, ಆದರೆ ಎಲ್ಲೂ ಹೆಚ್ಚು ಕಾಲ ಉಳಿಯಲಿಲ್ಲ. ಕ್ಷುಲ್ಲಕ ಕಾರಣಗಳಿಂದ ಹುದ್ದೆ ತೊರೆದಿದ್ದ. ಎಸಿ ವ್ಯವಸ್ಥೆ ಆರೋಗ್ಯಕ್ಕೆ ಹಾಳು ಎಂದು ಕೆಲಸ ಬಿಟ್ಟರೆ, ಇನ್ನೂ ಕೆಲವು ಕಡೆ ಮೇಲಾಧಿಕಾರಿಗಳ ಮೇಲೆ ಸಿಟ್ಟಿನಿಂದ ಹೊರಬಂದ, ಇನ್ನೂ ಕೆಲವು ಕಡೆ ಒತ್ತಡ ಎಂದು ಹೊರಬಂದ…!

ಆದಿತ್ಯ ರಾವ್ ಪೊಲೀಸರಿಗೆ ನೀಡಿರುವ ಮಾಹಿತಿಯಂತೆ ಆತ ಐಸಿಐಸಿಐ ಪ್ರ್ಯುಡೆನ್ಶಿಯಲ್, ಎಚ್‌ಎಸ್‌ಬಿಸಿ, ಎಚ್‌ಡಿಎಫ್‌ಸಿ ಲೈಫ್‌   ಸೇರಿದಂತೆ ವಿವಿಧ ಹಣಕಾಸು ಸಂಬಂಧಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾನೆ. ನಂತರ ಬ್ಯಾಂಕಿಂಗ್ ಕ್ಷೇತ್ರ ಬಿಟ್ಟು ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಧಾರದಲ್ಲಿ  ಕೆಲಸ ಪಡೆದ. ಈ ಆಧಾರದಲ್ಲಿ ಬೆಂಗಳೂರಿನಲ್ಲಿ ವಿವಿದೆಡೆ ಉತ್ತಮ ಕಂಪನಿಗಳಲ್ಲಿ  ಕೆಲಸ ಮಾಡಿದ. ಅಲ್ಲೂ ಕ್ಷೇತ್ರ ಸರಿ ಇಲ್ಲ ಎಂದು ಕೆಲಸ ಬಿಟ್ಟು  ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಅರ್ಜಿ ಹಾಕಿ. ಆದರೆ ಇಲ್ಲಿ ಕೆಲಸ ದೊರೆಯದ ಬಳಿಕ ಹೋಟೆಲ್ ಕೆಲಸ, ಹೋಟೆಲ್ ಸೆಕ್ಯೂರಿಟಿ ಗಾರ್ಡ್ ಕೆಲಸ ಸೇರಿದಂತೆ ವಿವಿದೆಡೆ ಕೆಲಸ ಮಾಡಿದ.

ಕೊನೆಗೆ ಈ ವ್ಯವಸ್ಥೆಯೇ ಸರಿ ಇಲ್ಲ ಎಂದು ಹೇಳುತ್ತಲೇ ಈಗ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವ ಮೂಲಕ ಬಾಂಬರ್ ಆಗಿದ್ದಾನೆ. ಅತೀ ಹೆಚ್ಚು ಓದಿ ಡಬಲ್ ಗ್ರಾಜುವೇಟ್ ಆಗಿ ಬ್ಯಾಂಕಿಂಗ್ ನಿಂದ ಬಾಂಬರ್ ವರೆಗೆ ಆದಿತ್ಯ ರಾವ್ ಡಿಮೋಶನ್ ಆಗುತ್ತಲೇ ಪೊಲೀಸ್ ಅತಿಥಿಯಾದ…!

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

10 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

10 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

16 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

18 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

18 hours ago