Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

3 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago