Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago