ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು ವಿವಿಧ ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.
ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.
ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.
ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…