Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

11 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago