Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

5 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

9 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

19 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago