ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡುತ್ತಿದ್ದಾರೆ. ಯೋಧ ಗಂಗಯ್ಯ ಅವರು ತೀವ್ರವಾದ ಸವಾಲುಗಳನ್ನು ತೆಗೆದುಕೊಂಡು ಮಣ್ಣಿನ ಆಳದಲ್ಲಿ ಬಾಂಬ್ ಇರಿಸಿ ಮರಳು ಮೂಟೆಗಳನ್ನು ಸುತ್ತಲೂ ಇಟ್ಟು ವೈಯರ್ ಹಾಗೂ ರಿಮೋಟ್ ಬಳಸಿ ಬಾಂಬ್ ಅನ್ನು ದೂರದಿಂದಲೇ ಸ್ಫೋಟಿಸುವ ಕಾರ್ಯ ನಡೆಸಿದ್ದಾರೆ. ಸ್ಫೋಟದ ವೇಳೆ ಅಲ್ಪ ಪ್ರಮಾಣದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ಮೂಲಕ ಭಾರೀ ಪ್ರಮಾಣದ ದುರಂತವೊಂದು ತಪ್ಪಿದಂತಾಗಿದೆ. ಹೀಗಾಗಿ ಇದೀಗ ಆತಂಕ ದೂರವಾಗಿದೆ. ತನಿಖೆ ಮುಂದುವರಿದಿದೆ.
ಈ ನಡುವೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರಬಹುದಾದ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಮತ್ತು ಆತ ವಿಮಾನ ನಿಲ್ದಾಣಕ್ಕೆ ಬಂದ ಮತ್ತು ಹೋಗಲು ಬಳಸಿದ ಆಟೋದ ಚಿತ್ರವನ್ನೂ ಸಹ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…