ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡುತ್ತಿದ್ದಾರೆ. ಯೋಧ ಗಂಗಯ್ಯ ಅವರು ತೀವ್ರವಾದ ಸವಾಲುಗಳನ್ನು ತೆಗೆದುಕೊಂಡು ಮಣ್ಣಿನ ಆಳದಲ್ಲಿ ಬಾಂಬ್ ಇರಿಸಿ ಮರಳು ಮೂಟೆಗಳನ್ನು ಸುತ್ತಲೂ ಇಟ್ಟು ವೈಯರ್ ಹಾಗೂ ರಿಮೋಟ್ ಬಳಸಿ ಬಾಂಬ್ ಅನ್ನು ದೂರದಿಂದಲೇ ಸ್ಫೋಟಿಸುವ ಕಾರ್ಯ ನಡೆಸಿದ್ದಾರೆ. ಸ್ಫೋಟದ ವೇಳೆ ಅಲ್ಪ ಪ್ರಮಾಣದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ಮೂಲಕ ಭಾರೀ ಪ್ರಮಾಣದ ದುರಂತವೊಂದು ತಪ್ಪಿದಂತಾಗಿದೆ. ಹೀಗಾಗಿ ಇದೀಗ ಆತಂಕ ದೂರವಾಗಿದೆ. ತನಿಖೆ ಮುಂದುವರಿದಿದೆ.
ಈ ನಡುವೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರಬಹುದಾದ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಮತ್ತು ಆತ ವಿಮಾನ ನಿಲ್ದಾಣಕ್ಕೆ ಬಂದ ಮತ್ತು ಹೋಗಲು ಬಳಸಿದ ಆಟೋದ ಚಿತ್ರವನ್ನೂ ಸಹ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…