ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡುತ್ತಿದ್ದಾರೆ. ಯೋಧ ಗಂಗಯ್ಯ ಅವರು ತೀವ್ರವಾದ ಸವಾಲುಗಳನ್ನು ತೆಗೆದುಕೊಂಡು ಮಣ್ಣಿನ ಆಳದಲ್ಲಿ ಬಾಂಬ್ ಇರಿಸಿ ಮರಳು ಮೂಟೆಗಳನ್ನು ಸುತ್ತಲೂ ಇಟ್ಟು ವೈಯರ್ ಹಾಗೂ ರಿಮೋಟ್ ಬಳಸಿ ಬಾಂಬ್ ಅನ್ನು ದೂರದಿಂದಲೇ ಸ್ಫೋಟಿಸುವ ಕಾರ್ಯ ನಡೆಸಿದ್ದಾರೆ. ಸ್ಫೋಟದ ವೇಳೆ ಅಲ್ಪ ಪ್ರಮಾಣದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ಮೂಲಕ ಭಾರೀ ಪ್ರಮಾಣದ ದುರಂತವೊಂದು ತಪ್ಪಿದಂತಾಗಿದೆ. ಹೀಗಾಗಿ ಇದೀಗ ಆತಂಕ ದೂರವಾಗಿದೆ. ತನಿಖೆ ಮುಂದುವರಿದಿದೆ.
ಈ ನಡುವೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರಬಹುದಾದ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಮತ್ತು ಆತ ವಿಮಾನ ನಿಲ್ದಾಣಕ್ಕೆ ಬಂದ ಮತ್ತು ಹೋಗಲು ಬಳಸಿದ ಆಟೋದ ಚಿತ್ರವನ್ನೂ ಸಹ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.