ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ

October 20, 2019
10:14 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮರು ಮತದಾನ ಇದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ರವಿವಾರದಿಂದಲೇ ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

 

14 ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದ ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯತ್ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನ.12ರಂದು ಚುನಾವಣೆ ಘೋಷಿಸಿದೆ.

ವೆಚ್ಚ ಮಿತಿ: ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.

ರಾಜಕೀಯ ಪಕ್ಷಗಳ‌ ಬ್ಯಾನರ್, ಕಟೌಟ್ ತೆರವುಗೊಳಿಸಲು ಸೂಚನೆ: ಮಂಗಳೂರು ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.  ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಹಾಕಿರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror