ಸುದ್ದಿಗಳು

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

Advertisement
Advertisement

ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮರು ಮತದಾನ ಇದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ರವಿವಾರದಿಂದಲೇ ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

 

14 ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದ ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯತ್ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನ.12ರಂದು ಚುನಾವಣೆ ಘೋಷಿಸಿದೆ.

Advertisement

ವೆಚ್ಚ ಮಿತಿ: ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.

ರಾಜಕೀಯ ಪಕ್ಷಗಳ‌ ಬ್ಯಾನರ್, ಕಟೌಟ್ ತೆರವುಗೊಳಿಸಲು ಸೂಚನೆ: ಮಂಗಳೂರು ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.  ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಹಾಕಿರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

2 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

6 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

6 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

6 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

14 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

15 hours ago