Advertisement
ಸುದ್ದಿಗಳು

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ

Share

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮರು ಮತದಾನ ಇದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ರವಿವಾರದಿಂದಲೇ ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

 

14 ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದ ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯತ್ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನ.12ರಂದು ಚುನಾವಣೆ ಘೋಷಿಸಿದೆ.

ವೆಚ್ಚ ಮಿತಿ: ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.

ರಾಜಕೀಯ ಪಕ್ಷಗಳ‌ ಬ್ಯಾನರ್, ಕಟೌಟ್ ತೆರವುಗೊಳಿಸಲು ಸೂಚನೆ: ಮಂಗಳೂರು ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.  ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಹಾಕಿರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

14 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

23 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

23 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

23 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago