ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಶೆ.59.67 ಮತದಾನ

November 12, 2019
10:12 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ನ.12 ರಂದು ನಡೆದ ಚುನಾವಣೆಯಲ್ಲಿ ಶೆ.59.67 ಮತದಾನವಾಗಿದೆ. 3,94,894 ಮತದಾರರ ಪೈಕಿ 2,35,628 ಮಂದಿ ಮತ ಚಲಾಯಿಸಿದ್ದಾರೆ. ಮತದಾನ ಶಾಂತಿಯುತವಾಗಿ ನಡೆಯಿತು.

Advertisement
Advertisement
Advertisement

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಗರದ ಲೇಡಿಹಿಲ್ ಚರ್ಚ್ ಸಮೀಪದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾಯಿಸಿದರು. ಮತದಾನಕ್ಕಾಗಿ 448 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿತ್ತು. 27 ಮಂದಿ ಪಕ್ಷೇತರರ ಸಹಿತ 60 ವಾರ್ಡ್‌ಗಳಲ್ಲಿ 180 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Advertisement

ಶಾಂತಿಯುತ ಮತದಾನ: ಡಿಸಿ ಕೃತಜ್ಞತೆ : ಮಂಗಳೂರು ಮಹಾನಗರಪಾಲಿಕೆಗೆ ಯಾವುದೇ ಗೊಂದಲಗಳಿಲ್ಲದೇ, ಶಾಂತಿಯುತವಾಗಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದರೂ, ಯಾವುದೇ ಲೋಪಗಳಿಲ್ಲದೆ ಚುನಾವಣೆ ನಡೆದಿದೆ. ಇದಕ್ಕಾಗಿ ತೊಡಗಿಸಿಕೊಂಡ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸರಿಗೆ ಧನ್ಯವಾದ ಸಲ್ಲಿಸಿರುವ ಅವರು, ಚುನಾವಣೆ ಸುಗಮವಾಗಲು ಸಹಕರಿಸಿದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚುನಾವಣೆ ಎಂಬುದು ಯುದ್ಧವಲ್ಲ | ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ | ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ |
March 26, 2024
11:06 AM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಕೇಂದ್ರದಿಂದ ಸಿಗದ ಬರ ಪರಿಹಾರ | ಬರ ಪರಿಹಾರಕ್ಕಾಗಿ ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ಸಿದ್ದರಾಮಯ್ಯ ಸರ್ಕಾರ | ಸರ್ಕಾರದ ನಡೆಯ ವಿರುದ್ಧ ಬಿಜೆಪಿ ಗರಂ |
March 23, 2024
11:55 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಕೊನೆಗೂ ದಿನಾಂಕ ನಿಗಧಿಪಡಿಸಿದ ಸರ್ಕಾರ | ಸೋಮವಾರದಿಂದ 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ!
March 22, 2024
11:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror