Advertisement
Political mirror

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಶೆ.59.67 ಮತದಾನ

Share

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ನ.12 ರಂದು ನಡೆದ ಚುನಾವಣೆಯಲ್ಲಿ ಶೆ.59.67 ಮತದಾನವಾಗಿದೆ. 3,94,894 ಮತದಾರರ ಪೈಕಿ 2,35,628 ಮಂದಿ ಮತ ಚಲಾಯಿಸಿದ್ದಾರೆ. ಮತದಾನ ಶಾಂತಿಯುತವಾಗಿ ನಡೆಯಿತು.

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಗರದ ಲೇಡಿಹಿಲ್ ಚರ್ಚ್ ಸಮೀಪದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾಯಿಸಿದರು. ಮತದಾನಕ್ಕಾಗಿ 448 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿತ್ತು. 27 ಮಂದಿ ಪಕ್ಷೇತರರ ಸಹಿತ 60 ವಾರ್ಡ್‌ಗಳಲ್ಲಿ 180 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಶಾಂತಿಯುತ ಮತದಾನ: ಡಿಸಿ ಕೃತಜ್ಞತೆ : ಮಂಗಳೂರು ಮಹಾನಗರಪಾಲಿಕೆಗೆ ಯಾವುದೇ ಗೊಂದಲಗಳಿಲ್ಲದೇ, ಶಾಂತಿಯುತವಾಗಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದರೂ, ಯಾವುದೇ ಲೋಪಗಳಿಲ್ಲದೆ ಚುನಾವಣೆ ನಡೆದಿದೆ. ಇದಕ್ಕಾಗಿ ತೊಡಗಿಸಿಕೊಂಡ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸರಿಗೆ ಧನ್ಯವಾದ ಸಲ್ಲಿಸಿರುವ ಅವರು, ಚುನಾವಣೆ ಸುಗಮವಾಗಲು ಸಹಕರಿಸಿದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

12 minutes ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

50 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

10 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

14 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago