ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡಿದ್ದಾರೆ. ಇದೀಗ ಶಂಕಿತ ಆರೋಪಿಯ ರೇಖಾ ಚಿತ್ರ ಹಾಗೂ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇದರ ಜೊತೆಗೆ ಶಂಕಿತ ವ್ಯಕ್ತಿ ಬಂದ ರಿಕ್ಷಾದ ಚಿತ್ರವನ್ನೂ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಶಂಕಿತ ವ್ಯಕ್ತಿಯು ಕಪ್ಪು ಬಣ್ಣದ ಪ್ಯಾಂಟ್ ಬಿಳಿ ಗೆರೆ ಹೊಂದಿರುವ ಶರ್ಟ್ ಧರಿಸಿ ಬಿಳಿ ಸಂಖ್ಯೆ ನಮೂದಾಗಿರುವ ಟೋಪ್ಪಿ ಹಾಗೂ ಕನ್ನಡಕ ಧರಿಸಿದ್ದಾನೆ. ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವ ಚಿತ್ರ ಇದಾಗಿದ್ದು ಈ ವ್ಯಕ್ತಿಯು ಆಗಮಿಸಿದ ಬಗ್ಗೆ ಎಲ್ಲಾ ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೆಂಜಾರುವರೆಗೆ ಬಂದು ಅಲ್ಲಿಂದ ಬಾಡಿಗೆ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ವಿಮಾನ ನಿಲ್ದಾಣದಿಂದ ತೆರಳುವಾಗಲೂ ರಿಕ್ಷಾದಲ್ಲಿ ತೆರಳಿದ್ದಾನೆ ಎಂದು ಪೊಲೀಸರು ಆರಂಭದ ಮಾಹಿತಿ ನೀಡಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…