Advertisement
ರಾಷ್ಟ್ರೀಯ

ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಿಸಲು ಸಂಸದ ನಳಿನ್ ಕುಮಾರ್ ಕಟೀಲು ಅಧಿವೇಶನದಲ್ಲಿ ಒತ್ತಾಯ

Share

ಮಂಗಳೂರು: ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.

Advertisement
Advertisement
Advertisement
Advertisement

ಕನ್ನಡದಲ್ಲೇ ಮಾತನಾಡಿದ ನಳಿನ್ ಕುಮಾರ್ ಕಟೀಲು ಮಂಗಳೂರು ವಿಮಾನ ನಿಲ್ದಾಣದಲ್ಲಿ  ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವಿಮಾನ ಇನ್ನೂ 20 ಅಡಿ ಮುಂದಕ್ಕೆ ಚಲಿಸಿದ್ದರೆ, ಈ ಹಿಂದೆ 2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು. ಇದಲ್ಲದೆ ಇದೇ ರೀತಿ 1981 ಆಗಸ್ಟ್ 19ರಂದು ಇಂಡಿಯನ್ ಏರ್ ಲೈನ್ಸ್ ವಿಮಾನವು ರನ್-ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲಾ ದುರ್ಘಟನೆಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಕಿರಿದಾದ ರನ್ ವೇ ಕಾರಣವಾಗಿರುತ್ತದೆ. ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು  ಸಂಸದರು ಆಗ್ರಹಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

11 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

15 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

15 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

16 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago