ಮಂಗಳೂರು: ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.
ಕನ್ನಡದಲ್ಲೇ ಮಾತನಾಡಿದ ನಳಿನ್ ಕುಮಾರ್ ಕಟೀಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವಿಮಾನ ಇನ್ನೂ 20 ಅಡಿ ಮುಂದಕ್ಕೆ ಚಲಿಸಿದ್ದರೆ, ಈ ಹಿಂದೆ 2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು. ಇದಲ್ಲದೆ ಇದೇ ರೀತಿ 1981 ಆಗಸ್ಟ್ 19ರಂದು ಇಂಡಿಯನ್ ಏರ್ ಲೈನ್ಸ್ ವಿಮಾನವು ರನ್-ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲಾ ದುರ್ಘಟನೆಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಕಿರಿದಾದ ರನ್ ವೇ ಕಾರಣವಾಗಿರುತ್ತದೆ. ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…