ಮಂಗಳೂರು: ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರು ಮಂಗಳೂರು ವಿಮಾನ ನಿಲ್ದಾಣದ ರನ್-ವೇಯನ್ನು ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು.
ಕನ್ನಡದಲ್ಲೇ ಮಾತನಾಡಿದ ನಳಿನ್ ಕುಮಾರ್ ಕಟೀಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗಡೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ವಿಮಾನ ಇನ್ನೂ 20 ಅಡಿ ಮುಂದಕ್ಕೆ ಚಲಿಸಿದ್ದರೆ, ಈ ಹಿಂದೆ 2010ರ ಮೇ 22ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಕಿರಿದಾದ ರನ್- ವೇಯಿಂದಾಗಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದು ವಿಮಾನದಲ್ಲಿದ್ದ 158 ಪ್ರಯಾಣಿಕರು ಮೃತಪಟ್ಟಿದ್ದರು. ಇದಲ್ಲದೆ ಇದೇ ರೀತಿ 1981 ಆಗಸ್ಟ್ 19ರಂದು ಇಂಡಿಯನ್ ಏರ್ ಲೈನ್ಸ್ ವಿಮಾನವು ರನ್-ವೇಯಿಂದ ಜಾರಿ ಕಂದಕದ ಸಮೀಪ ನಿಂತಿತ್ತು. ಈ ಎಲ್ಲಾ ದುರ್ಘಟನೆಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಕಿರಿದಾದ ರನ್ ವೇ ಕಾರಣವಾಗಿರುತ್ತದೆ. ಈ ಕೂಡಲೇ ಕೇಂದ್ರ ಸರಕಾರವು ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಯ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಹಾಗೂ ಈ ಘಟನೆಯ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…