ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್ ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು ಸಂಘರ್ಷಕ್ಕೆ ಕಾರಣವಾಗಿದೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…