ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್ ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು ಸಂಘರ್ಷಕ್ಕೆ ಕಾರಣವಾಗಿದೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…