ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್ ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು ಸಂಘರ್ಷಕ್ಕೆ ಕಾರಣವಾಗಿದೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…