Advertisement
ಸುದ್ದಿಗಳು

ಮಂಜುನಾಥನಗರ: ವರ್ಗಾವಣೆಗೊಂಡ ಶಿಕ್ಷಕಿಗೆ ಬೀಳ್ಕೊಡುಗೆ

Share

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಸೇವೆಸಲ್ಲಿಸಿ ಹಾಸನ ಜಿಲ್ಲೆಯ ಹೊಸನಗರ ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಕುಸುಮಾ ಐ.ಟಿ ಅವರಿಗೆ ಬೀಳ್ಕೊಡುಗೆ ಹಾಗೂ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹೊನ್ನಪ್ಪ ಗೌಡ ಜಾರಿಗೆತ್ತಡಿ ಅವರಿಗೆ ಗೌರವಾರ್ಪಣೆ ಡಿ.9ರಂದು ಮಂಜುನಾಥಗರ ಶಾಲೆಯಲ್ಲಿ ನಡೆಯಿತು.

ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಪರಣೆ ಅಧ್ಯಕ್ಷತೆ‌ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ,ಶಿಕ್ಷಕಿ ಕುಸುಮಾ ಅವರು ಹಾಸನ ಜಿಲ್ಲೆಯವರಾದರೂ ಕಳೆದ 18 ವರ್ಷಗಳಿಂದ ತಮ್ಮ ಕುಟುಂಬದ ಜತೆ ಮಂಜುನಾಥನಗರದಲ್ಲೇ ವಾಸ್ತ್ಯವ್ಯ ಇದ್ದು ನಮ್ಮ ಊರಿನವರಂತೆಯೆ ಆಗಿದ್ದಾರೆ. ಶಾಲೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಮಹತ್ವದ್ದು. ಅವರ ಪತಿ ಮಲ್ಲಿಕಾರ್ಜುನ ಅವರು ಊರಿನ ಎಲ್ಲಾ ಚಟುವಟಿಕೆಯಲ್ಲಿ,ಸಂಘ ಸಂಸ್ಥೆಗಳಲ್ಲಿ ಸಕ್ರೀಯಾರಗಿದ್ದುಕೊಂಡು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಅಪರೂಪದ ಸಹೃದಯ ವ್ಯಕ್ತಿತ್ವ ಹೊಂದಿದ್ದು,ಶಾಲೆಯ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಇತ್ತು ಎಂದರು.

ಮಂಜುನಾಥನಗರ ಪ್ರೌಢಶಾಲಾ ಮುಖ್ಯಶಿಕ್ಷಕಿ ಯಶೋಧಾ ವಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ವಿವೇಕಾನಂದ ಯುವಕ ಮಂಡಲದ ಗೌರವಾಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ವಿಮಲಾ, ಅಂಗನವಾಡಿ ಕಾರ್ಯಕರ್ತೆ ಸುಮಂಗಲಾ, ಶಾಲಾ ನಾಯಕಿ ಚೈತನ್ಯ , ವಿವೇಕಾನಂದ ಯುವಕ ಮಂಡಲದ ಸದಸ್ಯ ಸತ್ಯಪ್ರಕಾಶ್ , ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶುಭ ಹಾರೈಸಿದರು.

ಗೋಡ್ರೆಜ್ ಕೊಡುಗೆ
ಈ ಸಂದರ್ಭ ವರ್ಗಾವಣೆಗೊಂಡ ಮುಖ್ಯಶಿಕ್ಷಕಿ ಕುಸುಮಾ ಮಲ್ಲಿಕಾರ್ಜುನ ಐ.ಟಿ ಅವರು ಶಾಲೆಗೆ ಗೋಡ್ರೆಜ್ ಕೊಡುಗೆಯಾಗಿ ನೀಡಿದರು. ಮಂಜುನಾಥನಗರ ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಆ್ಯಗ್ನೇಸ್ ಪ್ರೆಸಿಲ್ಲಾ ಪಾಯಸ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ನಂದಿನಿ ಆರ್ ದೇವಾಡಿಗ ವಂದಿಸಿದರು. ಆರತಿ ಎಸ್ ಕಾರ್ಯಕ್ರಮ ನಿರೂಪಿಸಿದರು. ರೇಖಾ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

6 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

7 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

7 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

15 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

15 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago