ಮಂಜುನಾಥ ನಗರದಲ್ಲಿ 36ನೇ ವರ್ಷದ ಗಣೇಶೋತ್ಸವ

September 3, 2019
5:00 PM

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.

ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.

ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror