ಸುದ್ದಿಗಳು

ಮಂಜುನಾಥ ನಗರದಲ್ಲಿ 36ನೇ ವರ್ಷದ ಗಣೇಶೋತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.

Advertisement
Advertisement

ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.

ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

7 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

8 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

8 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

8 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

14 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

21 hours ago