ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.
ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.
ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…