Advertisement
ಸುದ್ದಿಗಳು

ಮಂಜುನಾಥ ನಗರದಲ್ಲಿ 36ನೇ ವರ್ಷದ ಗಣೇಶೋತ್ಸವ

Share

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.

ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.

ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

5 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

6 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

19 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago